ಹೊಸದಿಗಂತ ವರದಿ, ಮಂಗಳೂರು:
ದಸರಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅ.3 ರಿಂದ ಅ.16 ರವರೆಗೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಶಾಸಕ ವೇದವ್ಯಾಸ ಕಾಮತ್ ಅವರ ಮನವಿಯ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಹೆಚ್ಚುವರಿಯಾಗಿ ನಾಲ್ಕು ದಿನ ರಜೆ ಘೋಷಿಸಲಾಗಿದೆ.
ಮಂಗಳೂರು ದಸರಾ ಸೆ.26ರಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಶಾಲೆಗಳಿಗೆ ಸೆ.28ರಿಂದ ಅ.16ರವರೆಗೆ ರಜೆ ಇರಲಿದೆ. ಶಾಸಕ ವೇದವ್ಯಾಸ್ ಕಾಮತ್ ಅವರು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದಂತೆ ಶಾಲಾ ಮಕ್ಕಳ ದಸರಾ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡಲು ಆದೇಶ ಬಂದಿದೆ. ದಸರಾ ರಜೆಯನ್ನು ಸೆ.28ರಿಂದ ನೀಡಲು ಆದೇಶ ಬಂದಿದ್ದು. ಶಿಕ್ಷಣ ಸಚಿವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.