ದಸರಾ ಉತ್ಸವ: ಚಾಮುಂಡಿ ಬೆಟ್ಟದಲ್ಲಿ ಪೊಲೀಸ್‌ ಸರ್ಪಗಾವಲು, ಬೇಸತ್ತ ಜನ

 ಹೊಸದಿಗಂತ ವರದಿ ಮೈಸೂರು: 

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಜನರ ಭಾಗವಹಿಸುವಿಕೆ ಬಹಳ ಕಡಿಮೆಯಾಗಿತ್ತು.

ಮುಖ್ಯ ಮಂತ್ರಿಗಳು, ಸಚಿವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರಣ ಇಡೀ ಬೆಟ್ಟಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಹೆಜ್ಜೆ, ಹೆಜ್ಜೆಗೂ ಪೊಲೀಸರ ಕಿರಿಕಿರಿಯಿಂದ ಕಸಿವಿಸಿಗೊಂಡ ಜನರು, ಪ್ರವಾಸಿಗರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ದೂರದಿಂದಲೇ ಕೈ ಮುಗಿದರು.

ದಸರಾ ಉದ್ಘಾಟನೆ ಅಧಿಕಾರಿಗಳು, ಗಣ್ಯರಿಗೆ ಮಾತ್ರ ಸೀಮಿತವಾದಂತೆ ಕಂಡು ಬಂದಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!