ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಶಿವಾಜಿ ಪಾರ್ಕ್ನಲ್ಲಿ ದಸರಾ ರ್ಯಾಲಿ ನಡೆಸಲು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ
ಅಕ್ಟೋಬರ್ 2 ರಿಂದ ಅಕ್ಟೋಬರ್ 6 ರವರೆಗೆ ಸಿದ್ಧತೆಗಾಗಿ ಶಿವಸೇನೆಗೆ ಮೈದಾನ ನೀಡಲಾಗುವುದು.
ಅರ್ಜಿದಾರರ ಅರ್ಜಿಯನ್ನು ನಿರ್ಧರಿಸುವಲ್ಲಿ ಮುನ್ಸಿಪಲ್ ಕೌನ್ಸಿಲ್ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದನ್ನು ಹೈಕೋರ್ಟ್ ಗಮನಿಸಿದೆ.
ಇನ್ನು ಶಿವಾಜಿ ಪಾರ್ಕ್ನಲ್ಲಿ ದಸರಾ ರ್ಯಾಲಿಗೆ ಅನುಮತಿ ಕೋರಿ ಸಿಎಂ ಏಕನಾಥ್ ಶಿಂಧೆ ಬಣದ ಶಾಸಕ ಸದಾ ಸರ್ವಾಂಕರ್ ಅವರ ಮಧ್ಯಸ್ಥಿಕೆ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.