ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ನುಮುಂದೆ ಕಡ್ಡಾಯವಾಗಿ ಗ್ರಾಮೀಣಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ಕಾಯ್ದೆ ವಿಧಾನಪರಿಷತ್ನಲ್ಲಿ ಅಂಗೀಕಾರಗೊಂಡಿತು.
ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು, ಡಿ ಗ್ರೂಪ್ ಸಿಬ್ಬಂದಿಗಳು ದೀರ್ಘಕಾಲದವರೆಗೂ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಪಾರದರ್ಶಕತೆ ತರುವ ಸಲುವಾಗಿ ಇವರನ್ನ ವರ್ಗಾವಣೆ ಮಾಡಿದರೆ ನ್ಯಾಯಾಲಯದ ಮೊರೆ ಹೋಗಿ ವರ್ಗಾವಣೆಗೆ ತಡೆಯಾಜ್ಞೆ ತರುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳ ಕೊರತೆ ಉಂಟಾಗುತಿತ್ತು. ಇದನ್ನ ಸರಿದೂಗಿಸಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದರು.