ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ದಿಲ್ಲಿ ಸಾರಿಗೆ ಸಚಿವ ಕೈಲಾಶ್ ಗೆಹಲೋತ್, ಇ.ಡಿ ವಿಚಾರಣೆಗೆ ಖುದ್ದಾಗಿ ಹಾಜರಾಗಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಕಳುಹಿಸಿದ್ದ ಸಮನ್ಸ್ಗಳನ್ನು ಕೇಜ್ರಿವಾಲ್ ಪದೇ ಪದೇ ನಿರ್ಲಕ್ಷಿಸಿದ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಇದೇ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿಸಲಾಗಿದ್ದು, ದೆಹಲಿ ಸರ್ಕಾರವು ’ಅಬಕಾರಿ ನೀತಿ’ ಜಾರಿಗೆ ತಂದಿದ್ದ ಸಂದರ್ಭ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ಇಡಿ ಸಚಿವ ಕೈಲಾಶ್ ಗೆಹಲೋತ್ಗೆ ಕೂಡಾ ಸಮನ್ಸ್ ನೀಡಿತ್ತು.