ದಕ್ಷಿಣ ಕನ್ನಡದ ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆಗಳಲ್ಲಿ ಇಂದು ನಸುಕಿನ ವೇಳೆಗೆ ಮತ್ತೆ ಭೂಮಿ ಕಂಪಿಸಿದೆ. ಇದು ಕಳೆದ ಒಂದು ವಾರದ ಅವಧಿಯಲ್ಲಿ ಈ ಭಾಗದ ಜನತೆಗಾಗುತ್ತಿರುವ ಮೂರನೇ-ನಾಲ್ಕನೇ ಅನುಭವವಾಗಿದೆ. ಮೂಲಗಳ ಮಾಹಿತಿ ಪ್ರಕಾರ ಮಧ್ಯ ರಾತ್ರಿ 1.15 ರ ಬಳಿಕ ಘಟನೆ ನಡದಿದ್ದು, ಇದಕ್ಕೂ ಮುನ್ನ ವಿಚಿತ್ರ ರೀತಿಯಲ್ಲಿ ಭಾರೀ ಸದ್ದು ಕೂಡಾ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಂಪಾಜೆ, ಚೆಂಬು, ತೊಡಿಕಾನ, ಪೆರಾಜೆ, ಬಡ್ಡಡ್ಕ, ಸುಳ್ಯ, ಉಬರಡ್ಕ, ಎಲಿಮಲೆ, ಗುತ್ತಿಗಾರು ಪರಿಸರಗಳಲ್ಲಿ ಈ ಕಂಪನದ ಅನುಭವವಾಗಿದೆ. ಕಂಪನ ತೀವ್ರತೆ, ಹಾನಿ ನಷ್ಟಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!