ಜಮ್ಮು -ಕಾಶ್ಮೀರದಲ್ಲಿ ಎನ್‌ಕೌಂಟರ್‌: ಮುಂದುವರೆದ ಶೋಧ ಕಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ರಿಯಾಸಿ ಜಿಲ್ಲೆಯಲ್ಲಿ ಎನ್‌ಕೌಂಟರ್‌ ನಡೆದಿದ್ದು, ಓರ್ವ ಭಯೋತ್ಪಾದಕನ ಹತ್ಯೆಯಾಗಿತ್ತು ಮತ್ತು ಓರ್ವ ಸಿಬ್ಬಂದಿ ಗಾಯಗೊಂಡಿದ್ದ ಘಟನೆ ನಿನ್ನೆ ನಡೆದಿತ್ತು. ಇದೀಗ ಸ್ಥಳದಲ್ಲಿ ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ತುಲಿ ಪ್ರದೇಶದ ಗಾಲಿ ಸೊಹಾಬ್ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ನಿರ್ದಿಷ್ಟ ಮಾಹಿತಿ ಬಂದ ನಂತರ ನಿನ್ನೆ ಮಧ್ಯಾಹ್ನ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ವಲಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ಮಾಹಿತಿ ನೀಡಿದ್ದರು.

ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆಯುತ್ತಿವೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!