ಹೊಸದಿಗಂತ ವರದಿ, ಕಲಬುರಗಿ:
ಜಿಲ್ಲೆಯ ಚಿಂಚೋಳಿ ತಾಲೂಕಿನ ಕಾಂಗ್ರೆಸ್ ಮುಖಂಡರೊಬ್ಬರ ಮನೆ ಮೇಲೆ ಗುರುವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಮಾಜಿ ಸಚಿವ ವೈಜಿನಾಥ್ ಪಾಟೀಲ್ ಅವರ ತಮ್ಮ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ತೆಲಂಗಾಣ ನೋಂದಣಿ ಸಂಖ್ಯೆ ಇನೋವಾ ಕಾರ್ ನಲ್ಲಿ ಆಗಮಿಸಿದ ಅಧಿಕಾರಿಗಳು ಕೇಂದ್ರ ಮೀಸಲು ಪಡೆಯಯೊಂದಿಗೆ ಪರಿಶೀಲನೆ ನಡೆಸಿದರು.
ತಾಲೂಕಿನ ಪ್ರಭಾವಿ ವ್ಯಕ್ತಿಯಾಗಿರುವ ಬಾಬುರಾವ್ ಪಾಟೀಲ್ ಅವರು, ಈ ಹಿಂದೆ ಬಿಜೆಪಿ ಪಕ್ಷದಲ್ಲಿದ್ದರು, ಆದರೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರು. ಇದೀಗ ಅವರ ಮನೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.