ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 7ನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಫೆ.26 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಈ ಹಿಂದೆ ಕೇಜ್ರಿವಾಲ್ ಅವರಿಗೆ 2023ರ ನವೆಂಬರ್ 2 ಹಾಗೂ ಡಿಸೆಂಬರ್ 21 ರಂದು ಮತ್ತು 2024ರ ಜ.3, 18, ಫೆ.2, 14 ಹೀಗೆ 6 ಬಾರಿ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಕೇಜ್ರಿವಾಲ್ ಅವರು ಈ ಎಲ್ಲಾ ಸಮನ್ಸ್ ಗಳಿಗೆ ಹಾಜರಾಗದೇ ಗೈರಾಗಿದ್ದು, ಇದೀಗ 7ನೇ ಬಾರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ಎಲ್ಲಾ ಸಮನ್ಸ್ ಗಳು ಕಾನೂನುಬಾಹಿರ
ಈ ಎಲ್ಲಾ ಸಮನ್ಸ್ ಗಳು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತವಾಗಿದೆ. ಇದು ನಾನು ಚುನಾವಣಾ ಪ್ರಚಾರಕ್ಕೆ ಹೋಗದಂತೆ ತಡೆಯಲು ಮಾಡಿರುವ ಪಿತೂರಿ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.