ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ನವೆಂಬರ್ 17 ರಂದು ರಾಂಚಿಯಲ್ಲಿ ಹಾಜರಾಗುವಂತೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳು ವರದಿ ಮಡಿವೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಅವರ ಹೇಳಿಕೆಯನ್ನು ಪ್ರಶ್ನಿಸಲು ಮತ್ತು ದಾಖಲಿಸಿಕೊಳ್ಳಲು ಮುಂದಿನ ವಾರ ನವೆಂಬರ್ 17 ರಂದು ರಾಜ್ಯ ರಾಜಧಾನಿ ರಾಂಚಿಯಲ್ಲಿರುವ ತನ್ನ ಪ್ರಾದೇಶಿಕ ಕಚೇರಿಗೆ ಹಾಜರಾಗುವಂತೆ ಸಂಸ್ಥೆಯು ಸಿಎಂಗೆ ಸೂಚಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಸೋರೆನ್ ಅವರ ರಾಜಕೀಯ ಸಹಾಯಕ ಪಂಕಜ್ ಮಿಶ್ರಾ ಮತ್ತು ಸ್ಥಳೀಯ ಬಚ್ಚು ಯಾದವ್ ಮತ್ತು ಪ್ರೇಮ್ ಪ್ರಕಾಶ್ ಎಂಬುವವರನ್ನು ಇಡಿ ಬಂಧಿಸಿದೆ.
ರಾಜ್ಯದಲ್ಲಿ ಇದುವರೆಗೆ 1,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅಪರಾಧದ ಆದಾಯವನ್ನು “ಗುರುತಿಸಿದೆ” ಎಂದು ಸಂಸ್ಥೆ ಹೇಳಿದೆ.