ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕ ಸತೀಶ್ ಸೈಲ್ ಎಂಸಿಎ ಅಧ್ಯಕ್ಷರೂ ಆಗಿದ್ದರು. ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಬೆಂಗಳೂರಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಏಕಾಏಕಿ ಇಡಿ ಅಧಿಕಾರಿಗಳು ಸತೀಶ್ ಸೈಲ್ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಾಸಕರ ಮನೆಯ ಮುಂಭಾದಲ್ಲಿ ಸಿಐಎಸ್ಎಫ್ ಸಿಬ್ಬಂದಿಯ ಕಾವಲು ನಿಯೋಜಿಸಲಾಗಿದೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್ನಲ್ಲಿ ಜಾಮೀನು ಪಡೆದುಕೊಂಡಿದ್ದರು.