ದೆಹಲಿ ಅಬಕಾರಿ ನೀತಿ ಹಗರಣ : ಸಿಎಂ ಅರವಿಂದ್ ಕೇಜ್ರಿವಾಲ್ ಪಿಎಗೆ ಇಡಿ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕೆಪಿ ಅವರಿಗೆ ಸಮನ್ಸ್ ನೀಡಿದೆ.

ವಾರದ ಆರಂಭದಲ್ಲಿ, ದೆಹಲಿಯ ಇತ್ತೀಚೆಗೆ ಕೈಬಿಟ್ಟ ಮದ್ಯ ನೀತಿಯ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ), ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ವಿಚಾರಣೆಗೆ ಕರೆದಿತ್ತು.

ನಿನ್ನೆ ಸಿಸೋಡಿಯಾ ಅವರನ್ನು ವಿಚಾರಣೆ ನಡೆಸಬೇಕಿತ್ತು, ಆದರೆ ಅವರು ದೆಹಲಿ ಬಜೆಟ್‌ನಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಸಮಯದ ಗಡುವು ಕೇಳಿದರು. ಸಿಸೋಡಿಯಾ ಅರವಿಂದ್ ಕೇಜ್ರಿವಾಲ್ ಸರ್ಕಾರದ ಹಣಕಾಸು ಖಾತೆಯನ್ನು ನೋಡಿಕೊಳ್ಳುತ್ತಾರೆ. ಅವರ ಕೋರಿಕೆಗೆ ಸಮ್ಮತಿಸಿದ ಸಂಸ್ಥೆ ಹೊಸ ದಿನಾಂಕವನ್ನು ನಿಗದಿಪಡಿಸುವುದಾಗಿ ಘೋಷಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!