ಶಿವಸೇನಾ ಸಂಸದ ಸಂಜಯ್ ರಾವುತ್ ಮುಂಬೈ ನಿವಾಸಕ್ಕೆ ಇಡಿ ಟೀಮ್ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ಮುಂಬೈನಲ್ಲಿರುವ ಮನೆಗೆ ಇಡಿ ದಾಳಿ ನಡೆದಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿರುವ ಅಧಿಕಾರಿಗಳು, ತೀವ್ರ ಶೋಧ ನಡೆಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ರಾವುತ್, ನಾನು ಯಾವುದೇ ತಪ್ಪು ಮಾಡಿಲ್ಲ, ರಾಜಕೀಯ ದ್ವೇಷದ ಕಾರಣ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪತ್ರಾ ಚಾಲ್‌ ಭೂ ಹಗರಣಕ್ಕೆ ಸಂಬಂಧಿಸಿದ ರಾವುತ್ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಲು ಸಾಧ್ಯವಿಲ್ಲ ಎಂದು ಅವರ ಪರ ವಕೀಲರು ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!