ನೇತ್ರದಾನ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದ ಶಿಕ್ಷಣ ಸಚಿವ ನಾಗೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೇತ್ರದಾನ ಮಾಡಲು ‘ಪ್ರತಿಜ್ಞಾ ಪತ್ರ’ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ಅವರು ಸೋಮವಾರ ಸಹಿ ಹಾಕಿದರು.

ತಿಪಟೂರು ತಾಲೂಕು ಆಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವ ನಾಗೇಶ್ ಅವರು ನೇತ್ರದಾನ ಮಾಡುವ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದರು.

‘ಅನ್ನದಾನದಂತೆ ನೇತ್ರದಾನ ಕೂಡ ಶ್ರೇಷ್ಠ ದಾನವಾಗಿದೆ. ಮನುಷ್ಯ ತಾನು ಕಾಲವಾದ ನಂತರ ಮತ್ತೊಬ್ಬರ ಜೀವನದಲ್ಲಿ ಬೆಳಕು ಮೂಡಿಸುವ, ಜಗತ್ತನ್ನು ನೋಡಲು ಅವಕಾಶ ಕಲ್ಪಿಸುವ ಶ್ರೇಷ್ಠ ಕಾರ್ಯವೇ ನೇತ್ರದಾನ. ವಿವಿಧ ಕಾರಣಗಳಿಂದ ನಮ್ಮ ದೇಶದಲ್ಲಿ ಅಂಧತ್ವ ಎದುರಿಸುತ್ತಿರುವ ನಾಗರಿಕರ ಸಂಖ್ಯೆ ದೊಡ್ಡದಿದೆ. ಇಂತಹ ಅಂಧರ ಬಾಳಿನಲ್ಲಿ ಬೆಳಕು ಮೂಡಿಸುವ ಶ್ರೇಷ್ಠ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮುಂದಾಗಬೇಕು’ ಎಂದು ಸಚಿವ ನಾಗೇಶ್ ಅವರು ಕರೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!