ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾರುಖ್ ಅಭಿನಯದ ಹೊಸ ಸಿನಿಮಾ ‘ಪಠಾಣ್’ನಲ್ಲಿ ಬೇಷರಂ ರಂಗ್ನಲ್ಲಿ ನಟಿ ದೀಪಿಕಾ ಅವರ ಬಟ್ಟೆ ಹಾಗೂ ಹಾಡಿನ ಸಾಹಿತ್ಯ ವಿವಾದಕ್ಕೀಡಾಗಿದೆ.
ಮಧ್ಯಪ್ರದೇಶ ರಾಜ್ಯ ಸಚಿವ ನರೋತ್ತಮ್ ಮಿಶ್ರಾ ಹಾಡಿನಲ್ಲಿರುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಬೇಕು ಮತ್ತು ನಾಯಕ ಮತ್ತು ನಾಯಕಿಯ ವೇಷಭೂಷಣವೂ ಬದಲಾಗಬೇಕು ಎಂದು ಹೇಳಿದ್ದಾರೆ. ವೀರ ಶಿವಾಜಿ ಗ್ರೂಪ್ನ ಸದಸ್ಯರು ಇಂದೋರ್ನಲ್ಲಿ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿದರು.
ಡಿಸೆಂಬರ್ 14ರಂದು ಶಾರುಖ್ ಪ್ರತಿಕೃತಿ ದಹಿಸಿ ಚಿತ್ರ ನಿಷೇಧಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ‘ಪಠಾಣ್’ ಚಿತ್ರದಲ್ಲಿನ ಬೇಷರಮ್ ರಂಗ್ ಹಾಡಿನ ಸಾಹಿತ್ಯ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು, ಈ ಸಿನಿಮಾ ಬಾಯ್ಕಾಟ್ ಮಾಡಬೇಕೆಂದು ಒತ್ತಾಯ ಕೇಳಿಬರುತ್ತಿದೆ. ಏತನ್ಮಧ್ಯೆ, ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಆದಿತ್ಯ ಚೋಪ್ರಾ ನಿರ್ಮಿಸಿರುವ ಈ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಜೊತೆಗೆ ಜಾನ್ ಅಬ್ರಹಾಂ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
इंदौर में जलाया गया शाहरुख खान का पुतला शाहरुख खान की फिल्म पठान के गीत में भगवा रंग का इस्तेमाल किए जाने का हो रहा जगह-जगह विरोध हो रहा है इंदौर के वीर शिवाजी ग्रुप ने विरोध स्वरूप शारूख खान का मालवा मिल चौराहे पर पुतला जलाकर फिल्म का विरोध किया गया #pathan @AmitShah #indore pic.twitter.com/vpAHAtxZPG
— sameer khan (@Sameer18786K) December 14, 2022