‘ಶಿರಸಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುತ್ತಿದೆ’: ಸ್ಪೀಕರ್‌ ಕಾಗೇರಿ

ಹೊಸದಿಗಂತ ವರದಿ ಶಿರಸಿ :
ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಶಿರಸಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದ ಮಟ್ಟದಲ್ಲಿ ಹಚ್ಚಿನ ಪ್ರಯತ್ನ ನಡೆಸಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಇಲ್ಲಿನ ನಿಲೇಕಣಿ ಎಸ್.ವಿ.ಎನ್ ಸರಕಾರಿ ಪ.ಪೂ ಕಾಲೇಜಿನ ಪ್ರಯೋಗಾಲಯ, ಸಭಾಭವನ ಹಾಗೂ ಖಗೋಳ ದೂರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಅಭಿವೃದ್ದಿಗಾಗಿ ಶಿರಸಿಯಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಸಲು ಉದ್ದೇಶಿಸಿದ್ದು, ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಸರಕಾರದ ಮಟ್ಟದಲ್ಲಿ ಪ್ರಯತ್ನ ಮಾಡುತ್ತಿದ್ದೇವೆ. ಜಿಲ್ಲೆಗೊಂದು ವಿಶ್ವವಿದ್ಯಾಲಯ ಸ್ಥಾಪನೆ ಯುಜಿಸಿ ಮತ್ತು ಕೇಂದ್ರ ಸರಕಾರದ ಅಪೇಕ್ಷೆಯೂ ಆಗಿದೆ. ಇದನ್ನೇ ಉಪಯೋಗಿಸಿಕೊಂಡು ನಮ್ಮ ಜಿಲ್ಲೆಯಲ್ಲಿ ಅಂದರೆ ಶಿರಸಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ನಿರಂತರ ಪ್ರಯತ್ನ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಆಗುವ ಭರವಸೆಯೂ ಇದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!