ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಬೆಂಗಾವಲು ಪಡೆಯನ್ನು ಹೆಚ್ಚಿಸಿ ಪೊಲೀಸ್ ಇಲಾಖೆ ಆದೇಶಿಸಿದೆ.
ಅಧಿಕಾರಿ, ಸಿಬ್ಬಂದಿಗಳು ಸೇರಿ 21 ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮೂರು ಪಾಳಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ.
ಏನಾದ್ರು ಅವಘಡ ಸಂಭವಿದರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲು ಸಹ ತಿಳಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಂಗಳೂರು ಪೊಲೀಸರು ಭದ್ರತೆ ನೀಡಲಿದ್ದು, ಬೆಂಗಳೂರಿನಿಂದ ಹೊರ ಹೋಗುವ ವೇಳೆ ಹೈವೆ ಪ್ಯಾಟ್ರೋಲಿಂಗ್, ಸ್ಥಳೀಯ ಪೊಲೀಸರು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆದೇಶಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿಗೆ ಝಡ್ ಕ್ಯಾಟಗರಿ ಭದ್ರತೆಯನ್ನು ನೀಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಝಡ್ ಪ್ಲಸ್ ಭದ್ರತೆ ಕಲ್ಪಿಸಲಾಗಿದೆ.