ಹಣ್ಣು ತುಂಬಿದ ಐಶರ್ ವಾಹನ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ ಅಂಕೋಲಾ:

ಹಣ್ಣು ತುಂಬಿ ಮಹಾರಾಷ್ಟ್ರದಿಂದ ಕೇರಳಕ್ಕೆ ತೆರಳುತ್ತಿದ್ದ ಐಶರ್ ವಾಹನ ರಸ್ತೆ ಮಧ್ಯದಲ್ಲಿ ಪಲ್ಟಿಯಾಗಿ ಮರಕ್ಕೆ ಗುದ್ದಿದ್ದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ತಾಲೂಕಿನ ಕೊಡ್ಲಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.

ಲಾರಿ ಕ್ಲೀನರ್ ಸಹ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಮಹಾರಾಷ್ಟ್ರದ ಸಾಂಗ್ಲಿಯಿಂದ ಕೇರಳದ ಕೊಚ್ಚಿಗೆ ದಾಳಿಂಬೆ ಮತ್ತು ದ್ರಾಕ್ಷಿ ಹಣ್ಣುಗಳನ್ನು ತುಂಬಿ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ವಾಹನದಲ್ಲಿ ಸಿಲುಕಿದ್ದ ಮೃತ ದೇಹವನ್ನು ಹರಸಾಹಸಪಟ್ಟು ಕ್ರೇನ್ ಬಳಸಿ ಹೊರತೆರೆಯಲಾಗಿದೆ.
ಅಂಕೋಲಾ ಪೊಲೀಸ್ ನಿರೀಕ್ಷಕ ಜಾಕ್ಸನ್ ಡಿಸೋಜ, ಪಿ.ಎಸ್.ಐ ಪ್ರೇಮನಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ಚಾಲಕನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!