ಉಂಗುರ ನುಂಗಿ ಎಂಟು ತಿಂಗಳ ಮಗು ಸಾವು, ಆಟಿಕೆಗಳನ್ನು ನೀಡುವಾಗ ಜೋಪಾನ!

ಹೊಸದಿಗಂತ ವರದಿ ಮ‌ಡಿಕೇರಿ:

ಆಟವಾಡುತ್ತಾ ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು.

ತಕ್ಷಣ ಮಗುವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ, ಉಸಿರಾಟದ ಸಮಸ್ಯೆಯ ಪರಿಣಾಮ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಡಿಕೇರಿಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಯಿತಾದೂ, ಗುರುವಾರ ಬೆಳಗ್ಗೆ ಮಗು ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!