ಚುನಾವಣೆ ಅಲರ್ಟ್: ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 9.95 ಲಕ್ಷ ನಗದು ಜಪ್ತಿ!

ಹೊಸದಿಗಂತ ವರದಿ,ವಿಜಯಪುರ:

ದಾಖಲೆ ಇಲ್ಲದೆ ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 9.95 ಲಕ್ಷ ನಗದನ್ನು ವಿಧಾನಸಭಾ ಚುನಾವಣೆ ನೀತಿ ಸಂಹಿತಿ ಜಾರಿ ಹಿನ್ನೆಲೆ ಪೊಲೀಸರು ಜಪ್ತಿ ಮಾಡಿರುವ ಘಟನೆ ಜಿಲ್ಲೆ ನಿಡಗುಂದಿ ಪಟ್ಟಣದ ಯಲಗೂರು ಕ್ರಾಸ್ ಚೆಕ್‌ಪೋಸ್ಟ್ ಬಳಿ ಮಂಗಳವಾರ ನಡೆದಿದೆ.

ಕೆಎಸ್’ಆರ್’ಟಿಸಿ ಬಸ್‌ನಲ್ಲಿ ಹೊಸಪೇಟೆಯಿಂದ ವಿಜಯಪುರಕ್ಕೆ ಹೊರಟಿದ್ದ ನೂರ್‌ಖಾನ್ ಧಪೇದಾರ್ ಎಂಬಾತನ ಬಳಿ 9.95 ಲಕ್ಷ ನಗದು ಪತ್ತೆಯಾಗಿದೆ. ಈರುಳ್ಳಿ ಮಾರಾಟ ಮಾಡಿ ಬಂದ ಹಣ ಎಂದು ನೂರ್‌ಖಾನ್ ಹೇಳಿಕೆ ನೀಡಿದ್ದು, ದಾಖಲೆ ನೀಡಿ ಹಣ ಪಡೆದುಕೊಳ್ಳುವಂತೆ ತಹಶೀಲ್ದಾರರು ಸೂಚಿಸಿದ್ದಾರೆ.

ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!