ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದಲ್ಲಿ ಈ ಬಾರಿಯ ಚುನಾವಣೆ ಭಾರೀ ಗಮನ ಸೆಳೆದಿದೆ. ಪವನ್ ಕಲ್ಯಾಣ್ ಮತ್ತು ಚಂದ್ರಬಾಬು ನಾಯ್ಡು ಅವರು ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಅನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಈ ಚುನಾವಣೆಯಲ್ಲಿ ಅವರು ತಮ್ಮ ಜನಸೇನಾ ಪಕ್ಷಕ್ಕೆ ದೊಡ್ಡ ಉತ್ತೇಜನ ನೀಡಲು ಪ್ರಯತ್ನಿಸುತ್ತಿದ್ದಾರೆ.
ಪವನ್ ಪರವಾಗಿ ಮೆಗಾಸ್ಟಾರ್ ಕುಟುಂಬದ ಕೆಲವು ಸದಸ್ಯರು ಕೂಡ ಈ ಅಭಿಯಾನದಲ್ಲಿ ಭಾಗವಹಿಸಿದ್ದರು. ಆದರೆ, ಒಂದೇ ಕುಟುಂಬದ ಅಲ್ಲು ಅರ್ಜುನ್ ಮಾತ್ರ ವೈಎಸ್ಆರ್ಸಿಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಇದೀಗ ಪ್ರಚಾರದಲ್ಲಿದ್ದ ಅಲ್ಲು ಅರ್ಜುನ್ ಮೇಲೂ ಆರೋಪ ಕೇಳಿಬಂದಿದೆ.
ಆಂಧ್ರದ ನಾಂದ್ಯಾಲ್ ಕ್ಷೇತ್ರದ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ಶಿಲ್ಪಾ ರವಿಚಂದ್ರ ರೆಡ್ಡಿ ಪರವಾಗಿ ಅಲ್ಲು ಅರ್ಜುನ್ ಪ್ರಚಾರ ಮಾಡಿದ್ದಾರೆ. ನಿನ್ನೆ (ಮೇ 11) ಶಿಲ್ಪಾ ರವಿಚಂದ್ರ ರೆಡ್ಡಿ ಮನೆಗೆ ಭೇಟಿ ನೀಡಿದ್ದ ಅಲ್ಲು ಅರ್ಜುನ್, ತಮ್ಮ ಗೆಳೆಯನನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲು ಅರ್ಜುನ್ ಶಿಲ್ಪಾ ರವಿಚಂದ್ರ ರೆಡ್ಡಿ ಅವರ ಮನೆಗೆ ಬಂದು ಅಲ್ಲಿ ಸೇರಿದ್ದ ಜನರಿಗೆ ಕೈ ಬೀಸಿ ಗೆಳೆಯನ ಕೈ ಹಿಡಿದು ಮೇಲೆತ್ತಿ ಗೆಳೆಯನ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಬಳಿಕ ಅಲ್ಲಿಂದ ತೆರಳಿದ್ದಾರೆ. ಯಾವುದೇ ರೋಡ್ ಶೋನಲ್ಲಿ ಅಲ್ಲು ಅರ್ಜುನ್ ಪಾತ್ರವಿಲ್ಲ.