ಮೈಸೂರಿಗೆ ಚುನಾವಣಾ ಚಾಣಕ್ಯ ಆಗಮನ : ಬಿಜೆಪಿ ನಾಯಕರಿಂದ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದು, ಇಂದು ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.

ಮುಂಜಾನೆ 2:40 ಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿದರು. ಅವರನ್ನು ಪಕ್ಷದ ನಾಯಕರು, ಪ್ರಮುಖ ಅಧಿಕಾರಿಗಳು ಅವರನ್ನು ಏರ್‌ಪೋರ್ಟ್ ನಲ್ಲಿ ಸ್ವಾಗತಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್, ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್. ಶ್ರೀವತ್ಸ, ಪಕ್ಷದ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಶಾಸಕ ಎಸ್.ಎ. ರಾಮದಾಸ್, ಬಿ.ಹರ್ಷವರ್ಧನ್ ಮುಂತಾದವರು ಚುನಾವಣಾ ಚಾಣಕ್ಯನನ್ನು ಸ್ವಾಗತಿಸಿದರು.

ಅಮಿತ್ ಶಾ ಅವರು ಇಲ್ಲಿನ ಲ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ತಂಗಿದ್ದು, ಹೋಟೆಲ್ ಸುತ್ತಮುತ್ತ ಹಾಗೂ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!