May 11, 2026
Monday, May 11, 2026
spot_img

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆಗೆ 24 ಗಂಟೆಗಳ ಗಡುವು ನೀಡಿದ ಚುನಾವಣಾ ಆಯೋಗ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಚುನಾವಣಾ ಪ್ರಚಾರದ ಭರದಲ್ಲಿ ಪ್ರಧಾನಿ ಮೋದಿ ಕುರಿತು ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೆ ಸಂಕಷ್ಟ ಎದುರಾಗಿದ್ದು, 24 ಗಂಟೆಯೊಳಗೆ ಉತ್ತರ ನೀಡುವಂತೆ ಚುನಾವಣಾ ಆಯೋಗ ನೊಟೀಸ್ ಜಾರಿಗೊಳಿಸಿದೆ.

ಚುನಾವಣಾ ಪ್ರಚಾರದ ಕೊನೆಯ ದಿನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿದ್ದರು. ಈ ಬೆನ್ನಲ್ಲೇ ದೇಶವ್ಯಾಪ್ತಿ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಈ ಹಿನ್ನೆಲೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಆಯೋಗ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ನೊಟೀಸ್ ಜಾರಿಗೊಳಿಸಿದ್ದು, 24 ಗಂಟೆಯೊಳಗೆ ಸ್ಪಷ್ಟನೆ ನೀಡುವಂತೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !