ಚುನಾವಣಾ ಆಯೋಗದಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಶೋಕಾಸ್ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಚುನಾವಣಾ ಆಯೋಗ ಗುರುವಾರ ಶೋಕಾಸ್ ನೋಟಿಸ್ ನೀಡಿದೆ.

ರಾಜಸ್ಥಾನದ ದೌಸಾದಲ್ಲಿ ಭಾಷಣ ಮಾಡುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಪ್ರಿಯಾಂಕಾ ಗಾಂಧಿ ಮೇಲಿದೆ. ಅಕ್ಟೋಬರ್ 30ರ ಸಂಜೆ 5 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಪ್ರಿಯಾಂಕಾ ಗಾಂಧಿ ಅವರಿಗೆ ಆಯೋಗ ಸೂಚಿಸಿದೆ.

ಅಕ್ಟೋಬರ್ 20 ರಂದು ರಾಜಸ್ತಾನದ  ದೌಸಾದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಿಯಾಂಕಾ ವಾದ್ರಾ, ದೇವಸ್ಥಾನದಲ್ಲಿ ಪಿಎಂ ಮೋದಿ ನೀಡಿದ ದೇಣಿಗೆಯ ಲಕೋಟೆಯನ್ನು ತೆರೆದಾಗ ಅದು ಕೇವಲ ₹ 21 ಇತ್ತು ಎಂದು ಟಿವಿಯಲ್ಲಿ ನೋಡಿದೆ. ಅದು ನಿಜವೋ ಸುಳ್ಳೋ ಎಂದು ತಿಳಿದಿಲ್ಲ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಬಿಜೆಪಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!