ಚುನಾವಣಾ ಆಯೋಗದಿಂದ ಸುಪ್ರಿಯಾ ಶ್ರೀನಾಥೆ, ದಿಲೀಪ್‌ ಘೋಷ್‌ಗೆ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಮತ್ತು ಬಿಜೆಪಿಯ ದಿಲೀಪ್ ಘೋಷ್ ಅವರಿಗೆ ಚುನಾವಣಾ ಆಯೋಗವು ಶೋಕಾಸ್ ನೊಟೀಸ್ ನೀಡಿದೆ .

ಮಾರ್ಚ್‌ 29ರ ಸಂಜೆ 5 ಗಂಟೆಯ ಒಳಗಾಗಿ ನೊಟೀಸ್ ಗೆ ಉತ್ತರ ನೀಡಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ.
ಬಿಜೆಪಿಯ ಮಂಡಿ ಲೋಕಸಭಾ ಅಭ್ಯರ್ಥಿ ಕಂಗನಾ ರಣಾವತ್ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಸುಪ್ರಿಯಾ ಶ್ರೀನಾಥೆ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

ಇದಾದ ಬಳಿಕ ಬಿಜೆಪಿ ತನ್ನ ಮೇಲೆ ದಾಳಿ ನಡೆಸುತ್ತಿರುವ ನಡುವೆಯೇ ನನ್ನ ಸೋಶಿಯಲ್‌ ಮೀಡಿಯಾ ಅಕೌಂಟ್‌ನ ಆಕ್ಸೆಸ್‌ ಹೊಂದಿರುವ ಯಾರೋ ಒಬ್ಬರು ಇದನ್ನು ಪೋಸ್ಟ್‌ ಮಾಡಿದ್ದಾರೆ ಎಂದು ಸುಪ್ರಿಯಾ ಶ್ರೀನಾಥೆ ನಂತರ ಸ್ಪಷ್ಟನೆ ನೀಡಿದ್ದರು.

ಇನ್ನು ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಶ್ಚಿಮ ಬಂಗಾಳದ ಮಾಜಿ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರ ಕುಟುಂಬದ ಹಿನ್ನೆಲೆಯನ್ನು ಲೇವಡಿ ಮಾಡಿದ್ದರು.

ಹೀಗಾಗಿ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ನೀಡಿದ್ದು, ಉತ್ತರಿಸಲು ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!