ಕೆಜಿಎಫ್ ಬಾಬು ವಿರುದ್ಧ ದೂರು ದಾಖಲಿಸಿದ ಚುನಾವಣಾ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆಜಿಎಫ್‌ ಬಾಬು ಮನೆ ಮೇಲೆ ಬುಧವಾರದಂದು ನಡೆದ ಐಟಿ ದಾಳಿಯ ವೇಳೆ ಸಾವಿರಾರು ಮತದಾರರ ಗುರುತಿನ ಚೀಟಿ ಮತ್ತು ಗಿಫ್ಟ್‌ಗಳು ಪತ್ತೆಯಾಗಿದ್ದು, ಚುನಾವಣಾ ಆಯೋಗದಿಂದ ಇನ್ನಷ್ಟು ಕಠಿಣ ತನಿಖೆ ಶುರುವಾಗಿದೆ.

ಮೆಲ್ನೋಟಕ್ಕೆ ಅಕ್ರಮ ಎಸಗಿರುವುದು ಕಂಡು ಬಂದ ಹಿನ್ನೆಲೆ ಬಾಬು ವಿರುದ್ದ ಶಿವಾಜಿನಗರ ವಲಯದ ಚುನಾವಣಾ ಉಸ್ತುವಾರಿ ಅಧಿಕಾರಿಯಿಂದ ಹೈ ಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎನ್​ಸಿಆರ್ ದಾಖಲಾಗಿದ್ದು, ನ್ಯಾಯಾಲಯದಿಂದ ಅನುಮತಿ‌ ಪಡೆದ ಬಳಿಕ ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ.

ವಸಂತನಗರದಲ್ಲಿರುವ ರುಕ್ಸಾನ ಪ್ಯಾಲೇಸ್​ನಲ್ಲಿರುವ ಕೆಜಿಎಫ್ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಐಟಿ ದಾಳಿ ನಡೆಸಿ ಸುಮಾರು 18 ಗಂಟೆಗಳ ಕಾಲ ಶೋಧ ನಡೆಸಿದ್ದರು. ಬುಧವಾರ ಸಂಜೆ ಚುನಾವಣಾಧಿಕಾರಿಗಳ ದಾಳಿ ಮುಕ್ತಾಯಗೊಂಡಿದ್ದು, ಐಟಿ ಅಧಿಕಾರಿಗಳ ಶೋಧ ಮುಂದುವರಿದಿದೆ. ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ವಸ್ತು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!