ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಕೇತಗಾನಳ್ಳಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಮನಗರದ ಬಿಡದಿ ಬಳಿಯ ತೋಟದ ಮನೆ ಇದಾಗಿದ್ದು, ಇಂದು ಬಾಡೂಟ ಭೋಜನ ಕೂಟ ಏರ್ಪಡಿಸಲಾಗಿತ್ತು. ಮೈತ್ರಿ ಕಾರ್ಯಕರ್ತರು ಭೋಜನದಲ್ಲಿ ಭಾಗಿಯಾಗಿದ್ದರು. ಇನ್ನೇನು ಊಟ ಮಾಡಬೇಕು ಎನ್ನುವ ಸಮಯಕ್ಕೆ ಚುನಾವಣಾ ಅಧಿಕಾರಿಗಳು ಆಗಮಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿ ಕುಮರಸ್ವಾಮಿ ಸ್ಪರ್ಧಿಸಿದ್ದು, ಚುನಾವಣೆ ಹೊತ್ತಲ್ಲಿ ತೋಟದ ಮನೆಯಲ್ಲಿ ಭೋಜನ ಕೂಟ ಆಯೋಜನೆ ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೇ ಮತದಾರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಭೋಜನ ಕೂಟ ಆಯೋಜನೆ ಮಾಡಿದ್ದಾರೆ. ಹೆಚ್.ಡಿ.ಕೆ ತೋಟದ ಮನೆಯಿಂದ ಬಾಡೂಟ, ಮದ್ಯದ ವಾಸನೆ ಹೊರ ಬರುತ್ತಿದೆ ಎಂದು ಕಾಂಗ್ರೆಸ್ ಕೂಡ ಆರೋಪಿಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ರೇಡ್ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!