ಜನವರಿ ತಿಂಗಳೊಳಗೆ ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ: ಸಚಿವ ಭೈರತಿ ಸುರೇಶ್

ಹೊಸ ದಿಗಂತ ವರದಿ, ಮೈಸೂರು:

ಬರುವ ಜನವರಿ ತಿಂಗಳೊಳಗೆ ಮೈಸೂರು ಮಹಾನಗರ ಪಾಲಿಕೆಯ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದರು.

ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮಹಾನಗರ ಪಾಲಿಕೆ ಅವಧಿ ಈಗಷ್ಟೇ ಮುಗಿದಿದೆ. ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡುವ ಪ್ರಶ್ನೆ ಇಲ್ಲ. ಲೋಕಸಭಾ ಚುನಾವಣೆಗೂ-ನಗರ ಪಾಲಿಕೆ ಚುನಾವಣೆಗೂ ಯಾವುದೇ ಸಂಬAಧವಿಲ್ಲ. ಜನವರಿ ತಿಂಗಳ ಒಳಗೆ ಮೈಸೂರು ಮಹಾನಗರಪಾಲಿಕೆಗೆ ಚುನಾವಣೆ ಮಾಡುತ್ತೇವೆ ಎಂದರು.

ಮೈಸೂರು ಅಭಿವೃದ್ಧಿಗೆ 2 ಸಾವಿರ ಕೋಟಿ ರೂ ವೆಚ್ಚದ ಡಿಪಿಆರ್
ಮೈಸೂರು ಅಭಿವೃದ್ಧಿಗೆ 2 ಸಾವಿರ ಕೋಟಿ ಅನುದಾನ ನೀಡುಲಾಗುವುದು. ಬೆಂಗಳೂರು- ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೂ ವಿಶೇಷ ಆಸಕ್ತಿ ಇದೆ. ಎರಡನೇಯ ದರ್ಜೆಯ ನಗರಗಳು ಬೆಳೆಯಬೇಕು. ಅದರಲ್ಲೂ ಮೈಸೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರ. ಇಲ್ಲಿನ ರಿಂಗ್ ರಸ್ತೆಗೆ ನಾಲ್ಕೈದು ಕಡೆ ಪ್ಲೈ ಓವರ್ ಆಗಬೇಕಿದೆ. ಫೆರಿಫರಲ್ ರಿಂಗ್ ರಸ್ತೆ ಕೂಡ ನಿರ್ಮಾಣ ಆಗಬೇಕಿದೆ. ಎಲ್ಲವನ್ನ ಸೇರಿಸಿ ಎರಡು ಸಾವಿರ ಕೋಟಿ ರೂ. ಯೋಜನೆ ರೂಪಿಸುತ್ತಿದ್ದೇವೆ. ಇದು ಸಣ್ಣ ಮೊತ್ತ ಅಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿ ಡಿಪಿಆರ್ ಸಿದ್ದಪಡಿಸುತ್ತೇವೆ ಎಂದು ತಿಳಿಸಿದರು.

ಸಿಎಂ ಮತ್ತು ಡಿಸಿಎಂ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಪ್ರಧಾನಿ ಹೇಳಿಕೆಗೆ ಉತ್ತರ ಕೊಡುವ ದೊಡ್ಡ ವ್ಯಕ್ತಿ ನಾನಲ್ಲ. ಆದರೂ ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹಾರೇ ಬಿಜೆಪಿಯವರು. ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ್ದು ಬಿಜೆಪಿ. ಅವರು ಭ್ರಷ್ಟಾಚಾರ ಮಾಡಿ ಈಗ ಅದನ್ನು ನಮ್ಮ ಮೇಲೆ ಹೇಳುತ್ತಾರೆ. ಇಡೀ ರಾಜ್ಯದ ಜನರೇ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ರಾಜಕಾರಣದ ಬಗ್ಗೆ ನಾನು ಮಾತನಾಡಲ್ಲ. ರಾಜಕಾರಣ ಬಿಟ್ಟು ಬೇರೆ ಬೇಕಾದರೆ ಉತ್ತರಿಸುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!