ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಎರಡು ಹಂತದ ಲೋಕಸಭಾ ಚುನಾವಣೆ (Loksabha Elections 2024) ಮುಕ್ತಾಯವಾಗಿದೆ. ಎಲೆಕ್ಷನ್ ಸಮಾವೇಶ, ರ್ಯಾಲಿ, ಕ್ಯಾಂಪೇನ್ಗಳಲ್ಲಿ ಭಾಗಿಯಾಗಿದ್ದ ರಾಜ್ಯ ನಾಯಕರು ವಿಶಾಂತ್ರಿಗೆ ಜಾರಿದ್ದಾರೆ.
ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DJ Shivakumar) ಅವರು ಚುನಾವಣೆ ಮುಗಿಯುತ್ತಿದ್ದಂತೆಯೇ ಉಭಯ ನಾಯಕರು ವಿಶಾಂತ್ರಿಗೆ ಜಾರಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಚಿಕ್ಕಮಗಳೂರಿನ ರೆಸಾರ್ಟ್ವೊಂದಕ್ಕೆ ಹೋಗಿದ್ದರೆ, ಸಿದ್ದರಾಮಯ್ಯ ಊಟಿಯತ್ತ ಮುಖ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಕುಟುಂಬ ಸಮೇತ ರೆಸಾರ್ಟ್ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರಿನ ಸಾರಾಯ್ ರೆಸಾರ್ಟ್ನಲ್ಲೇ ಡಿಕೆಶಿ ಕುಟುಂಬ ವಾಸ್ತವ್ಯ ಹೂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆ ಸೋದರ ಡಿ.ಕೆ.ಸುರೇಶ್, ಶಾಸಕರಾದ ಡಾ.ರಂಗನಾಥ್, ಇಕ್ಬಾಲ್ ಹುಸೇನ್ ಕೂಡ ರೆಸಾರ್ಟ್ಗೆ ತಂಗಿದ್ದಾರೆ. ಸೆರಾಯ್ ರೆಸಾರ್ಟ್ ಡಿ.ಕೆ.ಶಿವಕುಮಾರ್ ಅಳಿಯ ಅಮಾರ್ತ್ಯ ಒಡೆತನದಾಗಿದ್ದು, ನಾಳೆ(ಮೆ 08) ಸಂಜೆವರೆಗೆ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ.
ಊಟಿಯತ್ತ ಸಿದ್ದರಾಮಯ್ಯ ಚಿತ್ತ
ರಾಜ್ಯದಲ್ಲಿ ಲೋಕಸಭಾ ಮತದಾನ ಇಂದಿಗೆ ಅಂತ್ಯವಾಗಿದೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣ, ಮಹಿಳೆಯ ಕಿಡ್ನಾಪ್ ಕೇಸ್ನಲ್ಲಿ ಕಾಂಗ್ರೆಸ್- ಜೆಡಿಎಸ್ ಮಧ್ಯೆ ವಾಕ್ಸಮರ ನಡೆಯುತ್ತಿದೆ. ಈ ಎಲ್ಲ ಬೆಳವಣಿಗೆ ರಾಜ್ಯದಲ್ಲಿ ನಡೆಯುತ್ತಿದ್ದರು ಸಿಎಂ ಸಿದ್ದರಾಮಯ್ಯ, ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ವಿಶ್ರಾಂತಿಗೆ ಹೋಗಿದ್ದಾರೆ. ಸಚಿವ ಹೆಚ್.ಸಿ ಮಹದೇವಪ್ಪ ಜೊತೆ 3 ದಿನಗಳ ಕಾಲ ವಿಶ್ರಾಂತಿ ಪಡೆಯಲು ಊಟಿಗೆ ತೆರಳುತ್ತಿದ್ದಾರೆ. ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಬಳಿಕ ಮೈಸೂರಿನಿಂದ ಊಟಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ತೆರಳಲಿದ್ದಾರೆ.