ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಸಿನೀರು ಕಾಯಿಸುವ ವಿದ್ಯುತ್ ಕಾಯಿಲ್ ನ ಶಾಕ್ ಹೊಡೆದು ವ್ಯಕ್ತಿಯೋರ್ವರು ಸ್ನಾನಗೃಹದಲ್ಲಿಯೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಎಂಬಲ್ಲಿ ನಡೆದಿದೆ.
ಮೂಲತಃ ನೀರುಮಾರ್ಗ ನಿವಾಸಿಯಾಗಿದ್ದು, ಪ್ರಸ್ತುತ ಬ್ರಹ್ಮರಕೊಟ್ಲು ಸಮೀಪದ ಚಂದ್ರಿಗೆ ಪರಿಯೋಡಿಬೀಡು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಹೇಮಚಂದ್ರ (49) ಮೃತಪಟ್ಟವರಾಗಿದ್ದಾರೆ.
ಹೇಮಚಂದ್ರ ಅವರ ಪತ್ನಿ ಮನೆ ಚಂದ್ರಿಗೆಯಲ್ಲಿದ್ದು, ಅಲ್ಲೇ ಸಮೀಪ ಪೆರಿಯೋಡಿಬೀಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಬ್ಬರು ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿದ್ದಾರೆ
ಹೇಮಚಂದ್ರ ಅವರು ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದವರು ಸ್ನಾನ ಮಾಡಲು ಸ್ನಾನಗೃಹಕ್ಕೆ ತೆರಳಿದ್ದು,ಸುಮಾರು ಹೊತ್ತು ಕಳೆದರೂ ಗಂಡ ಸ್ನಾನ ಮುಗಿಸಿ ಹೊರಗೆ ಬಾರದಿದ್ದರಿಂದ ಅನುಮಾನಗೊಂಡು ಬಾಗಿಲು ತಟ್ಟಿ ಕರೆದರೂ ಯಾವುದೇ ಪ್ರತಿಕ್ರಿಯೆ ನೀಡದೆ ಇದ್ದು, ಬಾಗಿಲು ಮುರಿದು ನೋಡಿದಾಗ ಹೇಮಚಂದ್ರ ಅವರು ಸ್ನಾನಗೃಹದಲ್ಲಿ ಬಕೆಟ್ ನಲ್ಲಿ ಕೈಯಿದ್ದು ಕೆಳಗೆ ಬಿದ್ದಿದ್ದರು. ಬಿಸಿನೀರು ಕಾಯಿಸುವ ವಿದ್ಯುತ್ ಕಾಯಿಲ್ ನ ಶಾಕ್ ತಗುಲಿ ಅವರು ಕೆಳಗೆ ಬಿದ್ದಿದ್ದು,
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.