ಹೊಸ ದಿಗಂತ ವರದಿ, ಹುಬ್ಬಳ್ಳಿ:
ಮಂಟೂರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಗ್ನಿ ಅವಘಡವಾಗಿದ್ದು, ಸುಮಾರು ಐದು ಮನೆಗಳು ಸುಟ್ಟು ಅಪಾರ ಪ್ರಮಾಣದ ಆಸ್ತಿ ಹಾನಿಯಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಮಂಟೂರಿನ ದ್ಯಾಮವ್ವನ ಗುಡಿಯ ಓಣಿಯ ಖಾಸಿಂ ಸಾಬ ಎಂಬುವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಬ್ಲಾಸ್ಟ್ ಆಗಿದೆ. ಇದರಿಂದ ಬೆಂಕಿ ಅವಘಡ ಬಾರಿ ಪ್ರಮಾಣದಲ್ಲಿ ಆಗಿ ಸುತ್ತಮುತ್ತಲಿನ ಐದಾರು ಮನೆಗಳಿಗೆ ವ್ಯಾಪಿಸಿದೆ. ಗ್ರಾಮಸ್ಥರು ತಕ್ಷಣ ಆಗ್ನಿ ಶಾಮಕ ಸಿಬ್ಬಂದಿ ಹಾಗೂ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಬಾರಿ ದುರಂತ ತಪ್ಪಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿದ್ದು, ಎಷ್ಟು ಹಾನಿಯಾಗಿದೆ ಎಂದು ತಿಳಿದು ಬಂದಿಲ್ಲ ಎಂದು ಅಗ್ನಿ ಶಾಮಕ ದಳದ ಅಕಾರಿ ತಿಳಿಸಿದ್ದಾರೆ.