ಹೊಸದಿಗಂತ ವರದಿ ಶಿವಮೊಗ್ಗ :
ವಿದ್ಯತ್ ದರ ಏರಿಕೆ ಖಂಡಿಸಿ ನಗರದ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಇದಂತೆ ಬಿಜೆಪಿಯ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ.
ವಿದ್ಯತ್ ದರ ಏರಿಕೆ ಮಾಡುವ ಮೂಲಕ ಸರ್ಕಾರ ಜನರ ಮೇಲೆ ಅನಗತ್ಯ ಹೊರೆ ಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿಯೇ ಜಾಸ್ತಿಯಾಗಿದೆ ಎಂದು ಹೇಳುವ ಮೂಲಕ ಚುನಾವಣಾ ಪೂರ್ವ ತಾನು ನೀಡಿದ ಗ್ಯಾರಂಟಿಗಳನ್ನು ಈಡೇರಿಸಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮೆಸ್ಕಾಂ ಕಚೇರಿ ಒಳಗೆ ತೆರಳಿ ಮನವಿನೀಡಲುಯತ್ನಿಸಿದಾಗ ಪೊಲೀಸರು ತಡೆದಿದರಿಂದ ವಾಗ್ವಾದ ನಡೆದು ಬಳಿಕ ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆದೊಯ್ದು ಬಿಡುಗಡೆ ಮಾಡಿದರು. ಬುಧವಾರ ಇದೇ ಕಚೇರಿ ಮುಂದೆ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಮಾಡಿದ್ದರಿಂದಾಗಿ ಹೆಚ್ವಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.