ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ 1500 ಸಿಖ್ಖರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಇದು ಬಿಜೆಪಿಗೆ ಒಂದು ದೊಡ್ಡ ಹೆಜ್ಜೆಯಾಗಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಪಕ್ಷದ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಅವರ ಸಮ್ಮುಖದಲ್ಲಿ ಸಿಖ್ ಸಮುದಾಯದ ಪ್ರತಿನಿಧಿಗಳು ಪಕ್ಷಕ್ಕೆ ಸೇರ್ಪಡೆಗೊಂಡರು.
2024ರ ಲೋಕಸಭೆ ಚುನಾವಣೆಯಲ್ಲಿ ದೇಶವೇ ಮತ ಚಲಾಯಿಸುತ್ತಿದ್ದಂತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ನಮ್ಮ ಸಿಖ್ ಸಹೋದರರು ದೇಶಕ್ಕಾಗಿ ಹೇಗೆ ಪ್ರಾಣ ತ್ಯಾಗ ಮಾಡಿದ್ದಾರೆ ಎಂಬುದು ನಮಗೆ ತಿಳಿದಿದೆ. ಸಿಖ್ ಸಹೋದರರು ದೇಶದ ಮೇಲಿನ ಎಲ್ಲಾ ದಾಳಿಗಳಿಗೆ ತಕ್ಕ ಉತ್ತರವನ್ನು ನೀಡಿದ್ದಾರೆ ಮತ್ತು ಅಪಾರ ಕೊಡುಗೆ ನೀಡಿದ್ದಾರೆ.
ಇಂತಹ ಸಿಖ್ ಸಮುದಾಯದವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ನಮಗೆ ಹೆಮ್ಮೆ ಮತ್ತು ಸಂತೋಷದ ಸಂಗತಿ ಎಂದರು.