ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ: ಮೂವತ್ತು ಆನೆಗಳ ಹಿಂಡಿನಿಂದ ಅಪಾರ ಬೆಳೆ ನಾಶ; ಗ್ರಾಮಸ್ಥರಲ್ಲಿ ಆತಂಕ

ಹೊಸದಿಗಂತ ವರದಿ ಹಾಸನ:  ಬೇಲೂರು ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಗಂಗಾವರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸುಮಾರು 30 ಕಾಡಾನೆಗಳ ಹಿಂಡು ದಾಂಧಲೆ ನಡೆಸುತ್ತಿದೆ. ಕಾಫಿ, ಭತ್ತ, ಅಡಿಕೆ, ಮೆಕ್ಕೆಜೋಳ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೊಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೊಟ್ಟೆ, ತೊಳಲು, ಅನುಘಟ್ಟ, ಕಣಗುಪ್ಪೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಆನೆಗಳ ಹಿಂಡು ಸಂಚರಿಸುತ್ತಿದೆ. ಮರಿಗಳೇ ಹೆಚ್ಚಿರುವ ಹಿಂಡು ಗ್ರಾಮಗಳತ್ತ ನುಗ್ಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಆನೆಗಳನ್ನು … Continue reading ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ: ಮೂವತ್ತು ಆನೆಗಳ ಹಿಂಡಿನಿಂದ ಅಪಾರ ಬೆಳೆ ನಾಶ; ಗ್ರಾಮಸ್ಥರಲ್ಲಿ ಆತಂಕ