Saturday, November 8, 2025

ನೇಪಾಳದಲ್ಲಿ ತುರ್ತು ಪರಿಸ್ಥಿತಿ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರದಿಂದ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿದ್ದು, ತಿಭಟನಕಾರರು ಪ್ರಧಾನಿ ಕೆಪಿ ಒಲಿ ಶರ್ಮಾ ಮನೆಗೆ ನುಗ್ಗಿದ್ದಾರೆ. ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ್ದಾರೆ.

ಈಗಾಗಲೇ ರಾಜೀನಾಮೆ ನೀಡಿರುವ ಕೆಪಿ ಒಲಿ ಶರ್ಮಾ ಪಲಾಯನ ಮಾಡುವ ಸಾಧ್ಯತೆ ಇದೆ.ಇತ್ತ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ನೇಪಾಲದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ನೇಪಾಳ ಸಂಸತ್ತಿಗೂ ಪ್ರತಿಭಟನಕಾರರು ದಾಳಿ ಮಾಡಿದ್ದಾರೆ. ಕಟ್ಟಡದ ಕೆಲ ಭಾಗದಲ್ಲಿ ಬೆಂಕಿ ಹಚ್ಚಿದ್ದಾರೆ.

ಈ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟ ಬಂದ್ ಮಾಡಲಾಗಿದೆ. ಅಲ್ಲದೇ ನೇಪಾಳದಲ್ಲಿರುವ ಭಾರತೀಯರಿಗೆ ಹೆಲ್ಪ್ ಲೈನ್ ನಂಬರ್ ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

error: Content is protected !!