ಹರ್ಷನ ಮನೆಗೆ ಚಕ್ರವರ್ತಿ ಸೂಲಿಬೆಲೆ ಭೇಟಿ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಹೊಸದಿಗಂತ ವರದಿ, ಶಿವಮೊಗ್ಗ:

ಹಿಂದುಗಳ ರಕ್ಷಣೆ ನೀವೇ ಮಾಡುತ್ತೀರೋ ಅಥವಾ ನಾವೇ ಮಾಡಿಕೊಳ್ಳಬೇಕಾ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಖಾರವಾಗಿ ಪ್ರಶ್ನಿಸಿದ್ದಾರೆ.
ಮಂಗವಾರ ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಸಂಘಟನೆ ಕಾರ್ಯಕರ್ತನಮೇಲೆ ಹಲ್ಲೆ ನಡೆದು ಕೊಲೆಯಾಗಿದೆ.ಸರ್ಕಾರದಲ್ಲಿ ನಾನು ಕೇಳಿಕೊಳ್ಳುತ್ತೇನೆ. ನಾವು ಅಕ್ಟರ್, ಬಾಬರ್‌ನ ಕಾಲಕ್ಕೆ ತೆರಳುತ್ತಿದ್ದೇವೋ ಎಂಬ ಅನುಮಾನ ಶುರುವಾಗಿದೆ. ಸರ್ಕಾರದ ನಿರ್ವೀರ್ಯತೆ ಬಹಳಷ್ಟು ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿವವೊಗ್ಗದಲ್ಲಿ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ. ಇದು ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವೈಪಲ್ಯ. ಸರ್ಕಾರ ಕಣ್ಣು ಒರೆಸುವ ಕೆಲಸ ಮಾಡುತ್ತಿದೆ. ಕೊಲೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಿದರೆ ಸಾಲದು, ನಿಷ್ಪಕ್ಷಪಾತ ತನಿಖೆಯಾಗಿ,ಇದರ ಹಿಂದೆ ಇರುವ ಸಂಘಟನೆಗಳನ್ನು ಬಯಲಿಗೆಳೆಯಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!