ಹೊಸದಿಗಂತ ವರದಿ, ಕಲಬುರಗಿ:
ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಗುರುವಾರ ಸಾಯಂಕಾಲ್ರ, ಕಲಬುರಗಿ ನಗರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ.ದಾಕ್ಷಾಯಿಣಿ ಅವ್ವಾಜಿ ಅವರನ್ನು ಭೇಟಿ ಮಾಡಿ ಆಶರ್ವಾದ ಪಡೆದರು. ಡಾ.ಅಪ್ಪಾಜಿ ಅವರು ಚಕ್ರವರ್ತಿ ಸೂಲಿಬೆಲೆÉ ಅವರಿಗೆ ಶಾಲು ಹೊದಿಸಿ, ಹೂಗುಚ್ಚ ನೀಡಿ ಸನ್ಮಾನಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ.ದಾಕ್ಷಾಯಿಣಿ ಅವ್ವಾಜಿ ಅವರು ಸಂಘ ಮತ್ತು ಶರಣಬಸವ ವಿಶ್ವವಿದ್ಯಾಲಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕೊಡುಗೆಯನ್ನು ಸವಿಸ್ತಾರವಾಗಿ ವಿವರಿಸಿದರು.