ಖರ್ಗೆ ಕಾರ್ಯಕ್ರಮದಲ್ಲಿ ಖಾಲಿ ಖಾಲಿ ಕುರ್ಚಿ : ಜನ ಬಾರದ್ದಕ್ಕೆ ಪಕ್ಷದಿಂದಲೇ ಜಿಲ್ಲಾಧ್ಯಕ್ಷ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾನುವಾರ ಬಕ್ಸಾರ್‌ನ ದಲ್ಸಾಗರ್ ಕ್ರೀಡಾಂಗಣದಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಬರುವ ವಿಚಾರ ತಿಳಿದಿದ್ದರೂ ಬಹಳಷ್ಟು ಕುರ್ಚಿಗಳು ಖಾಲಿ ಇದ್ದವು.

ಖಾಲಿ ಕುರ್ಚಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದೇ ತಡ ತಮ್ಮ ಪಕ್ಷವೇ ಜಿಲ್ಲಾಧ್ಯಕ್ಷನನ್ನು ಅಮಾನತು ಮಾಡಿದೆ.

ಕ್ಸಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನೋಜ್ ಕುಮಾರ್ ಪಾಂಡೆಯನ್ನು ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿದೆ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿದೆ ಎಂದು ಬಿಹಾರ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಕೋಶದ ಅಧ್ಯಕ್ಷ ರಾಜೇಶ್ ರಾಥೋಡ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಕ್ಸಾರ್‌ನ ಕಾಂಗ್ರೆಸ್ ಶಾಸಕ ಸಂಜಯ್ ಕುಮಾರ್ ತಿವಾರಿ ಮುಂದೆ ಬಂದು ಕುರ್ಚಿಯಲ್ಲಿ ಕುಳಿತುಕೊಳ್ಳುವಂತೆ ಜನರಲ್ಲಿ ಕೇಳಿಕೊಳ್ಳುತ್ತಿದ್ದರು. ಖಾಲಿ ಕುರ್ಚಿಗಳು ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!