ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಭದ್ರತಾ ಸಿಬ್ಬಂದಿಯಿಂದ ನಕ್ಸಲ್ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಶಕುತುಲ್-ಕೇಶಮುಂಡಿ ಅರಣ್ಯಗಳಲ್ಲಿ ಮಾವೋವಾದಿಗಳ ಮುಖಂಡ ಕವಾಸಿ ಪಂಡಾರು ಹಾಗೂ 15-20 ನಕ್ಸಲರು ಬೀಡುಬಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ 5.30ರ ಸುಮಾರಿಗೆ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ತಂಡವು ಭೈರಂಗಢ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶಕುತುಲ್ ಗ್ರಾಮದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಒಬ್ಬ ನಕ್ಸಲನ ಮೃತದೇಹ, ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!