ಕಣಿವೆ ರಾಜ್ಯದಲ್ಲಿ ಎನ್‌ಕೌಂಟರ್: ಎಲ್ಇಟಿ ಉಗ್ರನನ್ನು ಯಮಪುರಿಗಟ್ಟಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಣಿವೆ ರಾಜ್ಯದಲ್ಲಿ‌ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ರ್ಕ-ಎ-ತೊಯ್ಬಾ ಗೆ ಸೇರಿದ ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಬಾರಾಮುಲ್ಲಾದ ಪಟ್ಟಣ ನಿವಾಸಿ ಇರ್ಷಾದ್ ಅಹ್ಮದ್ ಭಟ್ ಸಾವನ್ನಪ್ಪಿದ ಉಗ್ರ.

ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿನ್ನಿರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದಾರೆ. ಪ್ರತಿ ದಾಳಿಯ ಸಂದರ್ಭ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್​ಇಟಿಯೊಂದಿಗೆ ಸಂಪರ್ಕ ಹೊಂದಿದ್ದ. ಈತನ ಬಳಿ ಇದ್ದ 1 ಎಕೆ47 ರೈಫಲ್, 30 ಸುತ್ತು ಗುಂಡು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!