ಪ್ರವಾಸಕ್ಕೆ ಬಂದಿದ್ದ ಇಂಜಿನಿಯರ್ ವಿದ್ಯಾರ್ಥಿ ನೀರು ಪಾಲು

ದಿಗಂತ ವರದಿ ರಾಮನಗರ :

ಜಿಲ್ಲೆಯ ಕನಕಪುರ ತಾಲೂಕಿನ ಪ್ರವಾಸಿತಾಣ ಚುಂಚಿ ಫಾಲ್ಸ್ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
ನೀರುಪಾಲಾಗಿರುವ ವಿದ್ಯಾರ್ಥಿಗೆ ಶೋಧಕಾರ್ಯ ಉತ್ತರಾಖಂಡ ಮೂಲದ ಅಂಬರ್ ಗಂಗುಲ ಎಂಬ ವಿದ್ಯಾರ್ಥಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ವಿದ್ಯಾರ್ಥಿಯು ದೊಮ್ಮಸಂದ್ರದಲ್ಲಿ ಕುಟುಂಬಸ್ಥರೊಂದಿಗೆ ವಾಸವಾಗಿದ್ದು, ಐವರು ಸ್ನೇಹಿತರೊಂದಿಗೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಚುಂಚಿ ಫಾಲ್ಸ್​ಗೆ ಬಂದಿದ್ದ. ಈ ವೇಳೆ ಈಜಲು ನೀರಿಗಿಳಿದ ಅಂಬರ್, ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ, ಸ್ಥಳೀಯ ನುರಿತ ಈಜುಗಾರರ ಸಹಾಯದಿಂದ ಶವಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!