ಮೆಟ್ರೋ ಪಿಲ್ಲರ್ ದುರಂತಕ್ಕೆ ಇಂಜಿನಿಯರ್, ಗುತ್ತಿಗೆದಾರರೇ ಕಾರಣ: ಐಐಎಸ್‌ಸಿ ವರದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಎಸ್‌ಸಿ ತಜ್ಞರ ತಂಡದ ವರದಿಯಲ್ಲಿ ಅವಘಡಕ್ಕೆ ಇಂಜಿನಿಯರ್ ಮತ್ತು ಗುತ್ತಿಗೆದಾರರೇ ಕಾರಣ ಎಂದು ಉಲ್ಲೇಖವಾಗಿದೆ.

ಕಿಶೋರ್ ಚಂದ್ರ ನೇತೃತ್ವದ ತಂಡ ವರದಿ ನೀಡಿದ್ದು, ಅವಘಡಕ್ಕೆ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಕಾಮಗಾರಿಗೆ ಬಳಸಿದ್ದ ಕಂಬಿ, ಮರಳು, ಸಿಮೆಂಟ್ ಕ್ವಾಲಿಟಿ ರಿಪೋರ್ಟ್ ಪಡೆಯಲಾಗಿದೆ. ಜತೆಗೆ ಪಿಲ್ಲರ್ ಎತ್ತರದ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಅಷ್ಟು ಉದ್ದದ ಪಿಲ್ಲರ್‌ನಲ್ಲಿ ಆರು ಅಂತಸ್ತಿನ ಮನೆ ಕಟ್ಟಬಹುದು, ಅಷ್ಟು ಉದ್ದದ ಪಿಲ್ಲರ್ ಕಟ್ಟಿದ್ದು ಯಾಕೆ? ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ, ಸರಿಯಾದ ಸಪೋರ್ಟ್ ಇಲ್ಲದ ಕಾರಣ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!