Friday, September 29, 2023

Latest Posts

ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಪರಿಸರ ಸಚಿವರು

ಹೊಸದಿಗಂತ ವರದಿ ಬೀದರ್:‌

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಸಾಲು ಮರದ ತಿಮ್ಮಕ್ಕ ನಿನ್ನೆ ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಬೆನ್ನು ಮೂಳೆಗೆ ಪಟ್ಟುಬಿದ್ದಿದ್ದು, ಬೆಂಗಳೂರು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೇ ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿನ ಜನರ ಅಷ್ಟೇ ಅಲ್ಲದೆ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ ಎಂದು ಹಾರೈಸಿದ್ದಾರೆ. ಅದಾಗ್ಯೂ ಸಿಎಂ ಕೂಡ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿದ್ದಾರೆ ಎಂದು ತಿಮ್ಮಕ್ಕ ಅವರಿಗೆ ಹೇಳಿದರು.

ಬಳಿಕ ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಈಶ್ವರ ಖಂಡ್ರೆ ಹೆಚ್ಚಿನ ಕಾಳಜಿ ವಹಿಸುವಂತೆ ವೈದ್ಯರಿಗೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!