Friday, June 9, 2023

Latest Posts

ಖಲಿಸ್ತಾನಿಗಳಿಂದ ತ್ರಿವರ್ಣಕ್ಕೆ ಅವಮಾನ: ಯುಕೆಯಲ್ಲಿ ಭಾರತೀಯ ಸಮುದಾಯದ ಮುಖಂಡರ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾರ್ಚ್ 19 ರಂದು ಯುನೈಟೆಡ್ ಕಿಂಗ್‌ಡಂ (ಯುಕೆ) ನಲ್ಲಿರುವ ಭಾರತೀಯ ಹೈಕಮಿಷನ್‌ಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ತ್ರಿವರ್ಣಕ್ಕೆ ಅವಮಾನವಾಗಿದ್ದಕ್ಕೆ ಭಾರತದ ಹೈ ಕಮಿಷನರ್ ವಿಕ್ರಮ್ ದೊರೈಸ್ವಾಮಿ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಭೆ ನಡೆಸಿದರು.

ಸೋಮವಾರ ಇಂಡಿಯಾ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಡೆಪ್ಯುಟಿ ಹೈಕಮಿಷನರ್ ಸುಜಿತ್ ಘೋಷ್ ಕೂಡ ಉಪಸ್ಥಿತರಿದ್ದರು ಎಂದು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಟ್ವಿಟರ್‌ನಲ್ಲಿ ಬರೆದುಕೊಂಡಿದೆ.

ದಾಳಿ ನಡೆದ ತಕ್ಷಣ, ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ವಿರುದ್ಧ ಪ್ರತ್ಯೇಕತಾವಾದಿ ಮತ್ತು ಉಗ್ರಗಾಮಿ ಅಂಶಗಳು ಕೈಗೊಂಡ ಕ್ರಮಗಳ ಬಗ್ಗೆ ಭಾರತದ ತೀವ್ರ ಟೀಕೆ ಮಾಡಿದ್ದು, ನವದೆಹಲಿಯಲ್ಲಿರುವ ಯುಕೆ ಹಿರಿಯ ರಾಜತಾಂತ್ರಿಕರನ್ನು ಕರೆಸಲಾಯಿತು.
ಖಲಿಸ್ತಾನಿಗಳು ಹೈಕಮಿಷನ್ ಆವರಣಕ್ಕೆ ಪ್ರವೇಶಿಸಲು ಅನುಮತಿ ನೀಡಿದ ಬ್ರಿಟಿಷ್ ಭದ್ರತೆಯ ಸಂಪೂರ್ಣ ಕೊರತೆಯನ್ನು ಭಾರತ ಪ್ರಶ್ನಿಸಿತು.

ಯುನೈಟೆಡ್ ಕಿಂಗ್‌ಡಂನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ನಡೆದ ದಾಳಿಯನ್ನು ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಕೂಡ ಖಂಡಿಸಿದ್ದರು. “ಭಾರತದ ಹೈಕಮಿಷನ್‌ನ ಆವರಣದ ವಿರುದ್ಧ ನಡೆಯುತ್ತಿರುವ ಅವಮಾನಕರ ಕೃತ್ಯಗಳನ್ನು ನಾನು ಖಂಡಿಸುತ್ತೇನೆ -ಇವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ” ಎಂದು ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!