ಹೊಸದಿಗಂತ ವರದಿ, ಶಿರಸಿ:
ಕೆರೆಕೈ ಭಾಗದಲ್ಲಿ ಚಿರತೆಯ ಓಡಾಟ ಹೆಚ್ಚಾದ ಕಾರಣ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತ್ ಸದಸ್ಯರ ಮತ್ತು ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ಚಿರತೆ ಹಿಡಿಯಲು ಬೋನನ್ನು ಇಟ್ಟು ಸೋಮವಾರ ಕೂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ. ವಲಯ ಅರಣ್ಯಾಧಿಕಾರಿ ಶಿವಾನಂದ್ ನಿಂಗಾನಿ . ಉಪ ಅರಣ್ಯಾಧಿಕಾರಿ ಧನಂಜಯ್ ನಾಯ್ಕ್ ಮತ್ತು ಗ್ರಾಮ ಪಂಚಾಯತಿ ಸದಸ್ಯರಾದ ಗಂಗಾಧರ ನಾಯ್ಕ್ . ಶ್ರೀನಾಥ್ ಶೆಟ್ಟಿ. ಮತ್ತು ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾದ ಗಿರೀಶ್ ಭಟ್ ಮತ್ತು ಅರಣ್ಯ ಇಲಾಖೆಯ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಮತ್ತು ಊರ ನಾಗರಿಕರು ಈ ಕಾರ್ಯದಲ್ಲಿ ಭಾಗವಹಿಸಿದ್ದರು.