ಹೊಸದಿಗಂತ ವರದಿ, ಶಿವಮೊಗ್ಗ
ಯಾವುದೇ ತಪ್ಪು ಮಾಡದೇ ಇದ್ದರೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತನಿಖೆ ಬಳಿಕ ಅವರು ನಿರ್ದೋಷಿಯಾಗಿ ಮತ್ತೆ ಸಚಿವರಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಅಪರಾಧ ಮಾಡದೇ ಇದ್ದರೂ ನೈತಿಕ ಹೊಣೆ ಹೊತ್ತು ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ಎದುರಿಸಿ, ತನಿಖೆಯಲ್ಲಿ ಆರೋಪ ಮುಕ್ತರಾಗುವ ವಿಶ್ವಾಸವಿದೆ. ದೇವರು ಅವರಿಗೆ ಒಳ್ಳೆಯದು ಮಾಡುತ್ತಾನೆ ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧ ಪೂರ್ಣ ಪ್ರಮಾಣದಲ್ಲಿ ತನಿಖೆ ನಡೆಯುತ್ತಿದೆ. ಎರಡು-ಮೂರು ತಿಂಗಳಲ್ಲಿ ತನಿಖೆಯ ಸತ್ಯಾಸತ್ಯತೆ ಹೊರಬೀಳಲಿದೆ. ನಿರ್ದೋಷಿಯಾಗಿ ಹೊರಬಂದು ಈಶ್ವರಪ್ಪ ಅವರು ಮತ್ತೊಮ್ಮೆ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುವರು ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ