ಪೊಲೀಸರ ಮೇಲೆ ಹಲ್ಲೆ: ಮುಸ್ಲಿಂ ಗೂಂಡಾಗಳ ವಿರುದ್ಧ ಕ್ರಮಕ್ಕೆ ಬದ್ದ-ಈಶ್ವರಪ್ಪ

ಹೊಸದಿಗಂತ ವರದಿ ಶಿವಮೊಗ್ಗ:

ಕೆಲ ಮುಸ್ಲಿಂ ಗೂಂಡಾಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವುದು ಅಮಾನವೀಯವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಟ್ಟುನಿಟ್ಟಿನ ಕ್ರಮಕ್ಕೆ ಮನವಿ ಮಾಡಲಾಗುವುದೆಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ದುಷ್ಕರ್ಮಿಯಿಂದ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇದೆ ಗುರುನಾಯ್ಕ ಅವರನ್ನು ಬುಧವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿಗಳನ್ನು ಹಿಡಿಯಲು ತೆರಳಿದ ಪೊಲೀಸರಿಗೆ ಚಾಕುವಿನಿಂದ ಇರಿಯುತ್ತಾರೆಂದರೆ ಇವರ ಅಟ್ಟಹಾಸ ಎಲ್ಲಿಗೆ ಹೋಗಿದೆ ಎಂಬುದು ಗೊತ್ತಾಗುತ್ತದೆ. ಕೆಲ ಮುಸ್ಲಿಂ ಗೂಂಡಾಗಳು ಶಿವಮೊಗ್ಗ ಶಾಂತಿಯಿಂದ ಇರಲು ಬಿಡುತ್ತಿಲ್ಲ. ಇವರ ಉದ್ದೇಶ ಏನೆಂದು ಇವರ ಕೃತ್ಯಗಳಿಂದಲೇ ಸ್ಪಷ್ಟವಾಗುತ್ತಿದೆ ಎಂದರು. ಪೊಲೀಸರ ಬಗ್ಗೆ ಇವರಿಗೆ ಭಯ ಇದ್ದರೂ ಅವರೊಳಗೆ ಸೇರಿಕೊಂಡಿರುವ ಗಾಂಜಾ ಇಂತಹ ಕೃತ್ಯ ಮಾಡಿಸುತ್ತಿದೆ. ಗಾಂಜಾ ಹಾಗೂ ರಾಬರಿ ಮಾಡುತ್ತಿರುವವರ ಮೇಲೆ ಇನ್ನಷ್ಟು ಬಿಗಿ ಕ್ರ‌ಮ ಕೈಗೊಳ್ಳಬೇಕಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!