ಹೊಸದಿಗಂತ ವರದಿ, ಶಿವಮೊಗ್ಗ:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್.ಈಶ್ವರಪ್ಪ ಕಣದಲ್ಲಿ ಉಳಿದಿದ್ದಾರೆ. ಇವರಿಗೆ ರೈತ ಚಿಹ್ನೆ ದೊರಕಿದೆ.
ಬಿಜೆಪಿಯಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ನ ಗೀತಾ ಶಿವರಾಜ್ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್ಸ್ಟರ್ ಎಂಪರ್ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಕಣದಲ್ಲಿದ್ದಾರೆ.