ದಿಗಂತ ವರದಿ, ವಿಜಯಪುರ
ಕೆ.ಎಸ್. ಈಶ್ವರಪ್ಪ ಅವರೇ ಸ್ವತಃ ರಾಜೀನಾಮೆ ಘೋಷಣೆ ಮಾಡಿದ್ದು, ನಮ್ಮ ಪಕ್ಷ ಒಲ್ಲದ ಮನಸ್ಸಿನಿಂದ ಅವರ ರಾಜೀನಾಮೆ ಸ್ವೀಕರಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರ ಹೊರ ವಲಯ ತೊರವಿ ಗ್ರಾಮದ ಲಕ್ಷ್ಮಿ ನರಸಿಂಹ ದೇವಾಲಯದ ದ್ವಾರಬಾಗಿಲ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ, ಈ ಸಂದರ್ಭ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸದ್ಯ ನಡೆಯುತ್ತಿರುವ ಹಾವಭಾವ ನೋಡಿದರೆ ಇದರ ಹಿಂದೆ ಕಾಂಗ್ರೆಸ್ ಪಕ್ಷವಿದೆ ಎಂಬುದರ ಬಗ್ಗೆ ಸಂಶಯ ಬರುತ್ತದೆ ಎಂದರು.
ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ, ಸಚಿವ ಸಂಪುಟ ವಿಸ್ತರಣೆ ಆದಾಗ ಮುಖ್ಯಮಂತ್ರಿಗಳು ಅದನ್ನು ನಿರ್ಧರಿಸುತ್ತಾರೆ. ಯಾವಾಗ ಆಗುತ್ತದೋ ಗೊತ್ತಿಲ್ಲ, ಆದರೆ ಐದು ಸ್ಥಾನ ಖಾಲಿ ಆಗಿರುವುದರಿಂದ ವಿಸ್ತರಣೆ ಆಗುತ್ತದೆ. ಈ ವೇಳೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್, ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.
ಇನ್ನೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಸವರಾಜ ಬೊಮ್ಮಾಯಿ ಅವರು ಅತ್ಯಂತ ಸಮರ್ಥವಾಗಿ ಕೆಲಸ ನಿಭಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ