ಈಟಿವಿ ಭಾರತ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಈಟಿವಿ ಭಾರತ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

ಸಂದೀಪ್ ಅವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾರ್ಚ್​​ 29ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿಗೆ (ಸ್ಪೈನಲ್ ಕಾರ್ಡ್​) ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಕಾಪು ತಾಲೂಕಿನ ಶಿರ್ವ ನಿವಾಸಿಯಾಗಿರುವ ಇವರು, ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಬ್ಲಿಕ್ ಟಿವಿ, ಸ್ಪಂದನಾ ಸುದ್ದಿ ವಾಹಿನಿಯಲ್ಲಿ ಕ್ಯಾಮರಾಮನ್, ಬಿ ಟಿವಿಯ ಕ್ಯಾಮರಾಮನ್ ಹಾಗೂ ವರದಿಗಾರರಾಗಿ ಇವರು ಸೇವೆ ಸಲ್ಲಿಸಿದ್ದು, ಪ್ರಸ್ತುತ ಈಟಿವಿ ಭಾರತ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.

ಸಂದೀಪ್ ಅವರು ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!